Clickable Image

Thursday, December 7, 2023

ವಾಡಿ ಪಟ್ಟಣದಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಕಿರುಕುಳಕ್ಕೆ ಬೇಸೆತ್ತು ಇಂಜಿನಿಯರ್ ಆತ್ಮಹತ್ಯೆ.

 ವಾಡಿ ಪಟ್ಟಣದಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಕಿರುಕುಳಕ್ಕೆ ಬೇಸೆತ್ತು ಇಂಜಿನಿಯರ್ ಆತ್ಮಹತ್ಯೆ



 ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಒಡೆತನದ ಎಸಿಸಿ ಸಿಮೆಂಟ್ ಕಂಪನಿಯಲ್ಲಿ ಇಂಜಿನಿಯರಿಂಗ್ ಆಗಿ ಸೇವೆ ಸಲ್ಲಿಸುತ್ತಿದ್ದ ರಮೇಶ್‌ ಪವಾ‌ರ್ (45) ಕಂಪನಿ ಆಡಳಿತ ಅಧಿಕಾರಿಗಳು ನೀಡಿದ ಮಾನಸಿಕ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.7ರ ಗುರುವಾರ ಬೆಳಗ್ಗೆ ವಾಡಿ ಪಟ್ಟಣದ ಎಸಿಸಿ ಕಾಲೋನಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ರಮೇಶ್ ಪವಾರ್ ಅವರು ಚಿತ್ತಾಪುರ ಮತಕ್ಷೇತ್ರದ ಮಾಜಿ ಶಾಸಕ ಬಿಜೆಪಿಯ ನಾಯಕ ದಿವಂಗತ ವಾಲ್ಮೀಕಿ ನಾಯಕ ಅವರ ಮಗಳ ಪತಿ. ಎಸಿಸಿಯ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಲ್ಲದೇ ಸಾಯುವ ಮುನ್ನ ವಿಡಿಯೋ ಮಾಡುವ ಮೂಲಕ ಎಸಿಸಿ ಆಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನನ್ನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕ್ಷೇತ್ರದ ಶಾಸಕ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.




Post a Comment

Whatsapp Button works on Mobile Device only